ಗ್ರಾ.ಪಂ ಗಳ ಕರೆ ಸಮಗ್ರ ಅಭಿವೃದ್ಧಿಗೆ ಸಿ.ಇ.ಓ. ಸ್ವರೂಪಾ ಆದೇಶ
ಧಾರವಾಡ 05 : ಜಿಲ್ಲೆಯ ಧಾರವಾಡ ತಾಲೂಕಿನ ನರೇಂದ್ರ ಮತ್ತು ಗರಗ ಗ್ರಾಮ ಪಂಚಾಯಿತಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಸ್ವರೂಪಾ ಟಿ ಕೆ ರವರು ಭೇಟಿ ನೀಡಿದರು
ಈ ಸಂದರ್ಭದಲ್ಲಿ ನರೇಂದ್ರ ಗ್ರಾಮದ ಕುಂಭಾಪುರ ಕೆರೆ ಮತ್ತು ಕೆಂಪುಗೆರೆಯನ್ನು ಸಮಗ್ರ ಅಭಿವೃದ್ಧಿಪಡಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು ಅಲ್ಲದೆ ನರೇಂದ್ರ ಗ್ರಾಮದಲ್ಲಿರುವ 7 ಕೆರೆಗಳನ್ನು ಸರ್ವೆ ಮಾಡಲು ತಹಶಿಲ್ದಾರರಿಗೆ ನಿರ್ದೇಶನ ನೀಡಿದರು.
ನಂತರ ಗರಗ ಗ್ರಾಮದ ಪಾಳಗಟ್ಟಿ ಕೆರೆಗೆ ಭೇಟಿ ನೀಡಿ ಗರಗ ಗ್ರಾಮದ ಸಮಗ್ರ ಅಭಿವೃದ್ಧಿಯ ಮಾಡುವಂತೆ ತಿಳಿಸಲಾಯಿತು.ನಂತರ ಕೆರೆ ಅಭಿವೃದ್ದಿ ಮಾಡಲು ನಾಳೆ ದಿ. 6 ರಂದು ಸಂಜೆ 4:30 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಸಂಬಂಧಿಸಿದ ಅಧಿಕಾರಿಗಳ ಜೊತೆ ಕೆರೆ ಅಭಿವೃದ್ಧಿ ಕುರಿತು ಚರ್ಚಿಸಲು ಸಭೆಯನ್ನು ಕರೆಯಾಗಿದೆ.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ ಚಂದ್ರು ಪೂಜಾರ, ಆರ್.ಡಬ್ಲ್ಯೂ ಎಸ್ ( RWS) ಇಲಾಖೆಯ ಸಂಗೀತ ಕಲಬುರ್ಗಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸಾರ್ವಜನಿಕರು ಹಾಜರಿದ್ದರು.
ಗ್ರಾ.ಪಂ ಗಳ ಕರೆ ಸಮಗ್ರ ಅಭಿವೃದ್ಧಿಗೆ ಸಿ.ಇ.ಓ. ಸ್ವರೂಪಾ ಆದೇಶ
Related Posts
ವಚನಗಳಲ್ಲಿ ವ್ಯಕ್ತಿತ್ವ ವಿಕಾಸ ಫೇ 12 ರಂದು
Spread the love ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಪೀಠ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆಬ್ರುವರಿ 12 ರಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬೆಳಿಗ್ಗೆ 10:30ಕ್ಕೆ, ‘ವಚನಗಳಲ್ಲಿ ವ್ಯಕ್ತಿತ್ವ ವಿಕಾಸ’, ಎಂಬ ವಿಶೇಷ…
ಮಾಸಿಕ ವೇತನ ಹೆಚ್ಚಳ — ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಆಶಾ ಕಾರ್ಯಕರ್ತೆಯರ ವಿಧಾನ ಸೌಧ ಚಲೋ
Spread the love ಧಾರವಾಡ:- ದುಡಿದ ಹಣಕ್ಕೆ ಕನ್ನ ಹಾಕುವ ಈಗಿರುವ ವೇತನ ಪಾವತಿ ಪ್ರಕ್ರಿಯೆಯನ್ನು ಕೈಬಿಡಲು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ವೇತನ ರೂ.15,000 ನಿಗದಿ ಮಾಡಲು ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಆಶಾ ಕಾರ್ಯಕರ್ತೆಯರ ವಿಧಾನ ಸೌಧ…