Spread the love

ಧಾರವಾಡ : ಲೋಕಸಭೆ ಕಾಂಗ್ರೇಸ್‌ ಟಿಕೆಟ್‌ ಯಾರಿಗೆ ಕೊಡಬೇಕು ಎಂಬುದು ಇನ್ನೂ ಫೈನಲ್‌ ಆಗಿಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು ಪಕ್ಷದಲ್ಲಿ  ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕ ಹೈಕಮಾಂಡ್‌ ಮತ್ತು ಡಿಕೆಶಿ ಅವರು ಟಿಕೆಟ್‌ ಯಾರಿಗೆ ಎಂಬುದನ್ನು ಪೈನಲ್‌ ಮಾಡುತ್ತಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ನಾನು ಬೇರೆ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ. ಅಲ್ಲಿ ಲೋಕಸಭೆ ಟಿಕೆಟ ಬಗ್ಗೆ ಚರ್ಚೆಯಾಗಿಲ್ಲ ಲೋಕಸಭೆ ಚುನಾವಣೆಗೆ ನಾವು ಮಾಡಿದ ಕೆಲಸಗಳನ್ನು ಮುಂದಿಟ್ಟುಕೊಂಡು ಹೋಗುತ್ತೇವೆ ಎಂದರು.

ನಿಗಮ ಮಂಡಳಿಗಳನ್ನು ಶಾಸಕರು ಮತ್ತು ಕಾರ್ಯಕರ್ತರಿಗೆ ಕೊಡುವ ನಿರ್ಧಾರವಾಗಿದೆ ಆ ಬಗ್ಗೆ ರಾಜ್ಯ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.