Spread the love

ಧಾರವಾಡ : ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ಜರುಗಿದೆ.

ಮುಮ್ಮಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದ್ದು , ಮುಖ್ಯ ರಸ್ತೆಯ ಬದಲಿಗೆ ಬೇರೆ ರಸ್ತೆಯ ತಿರುವು ಸಂಪರ್ಕ ಕಲ್ಪಿಸಲಾಗಿದೆ . ಆದರೆ , ಈ ರಸ್ತೆ ತಿರುವು ಕಾಣದ ಕಾರಣ ಸರ್ವಿಸ್ ರಸ್ತೆಯ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಯಾದಗಿರಿ ಜಿಲ್ಲೆಯ ದೀಪಕ್ ಎಂಬ 30 ವರ್ಷದ ವೈದ್ಯಕೀಯ ( ಮೆಡಿಕಲ್) ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ . ದೀಪಕ್ ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು.. ಕಾರಿನಲ್ಲಿದ್ದ ವಿನಯ್ ಎಂಬ ಮತ್ತೊಬ್ಬ ಯುವಕನಿಗೂ ಗಂಭೀರ ಗಾಯಗಳಾಗಿದ್ದು , ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ.