Spread the love

ಧಾರವಾಡ : ಕಲಬುರ್ಗಿ ನಗರದ ಕೋಟನೂರು ಪ್ರದೇಶದಲ್ಲಿ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಡಾ.ಬಾಬಾ ಸಾಹೇಬರ ಬರಹ ಅಸ್ಪೃಶ್ಯರ ಬದುಕು ಸಂಘಟನೆಯಿಂದ ಇಂದು ಬೃಹತ್ ಪ್ರತಿಭಟನೆ ಮಾಡಲಾಯಿತು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಕೂಡಲೇ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿ ಆರೋಪಿಗಳ ಬಂಧಿಸಿ ಅವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟದಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಮಂಜುನಾಥ್ ದೊಡ್ಡಮನಿ, ಮಂಜುನಾಥ್ ವರೂರ್, ಸುರೇಶ್ ಮಾದರ್,ಶ್ರೀನಿವಾಸ್ ಅವರ ಹಳ್ಳಿ, ಜಗದೀಶ್ ಮಾದರ್, ಉಮೇಶ್ ಎ ಎಚ್,ಪ್ರದೀಪ್ ಮೂಲಿಮನಿ,ನಾರಾಯಣ್ ಮದರ್, ಸಮೀರ್ ಸಬ್ಬಾಪುರ್ ಸೇರದಂತೆ ಮೊದಲಾದವರು ಭಾಗವಹಿಸಿದ್ದರು.