ಧಾರವಾಡ : ಕಲಬುರ್ಗಿ ನಗರದ ಕೋಟನೂರು ಪ್ರದೇಶದಲ್ಲಿ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಡಾ.ಬಾಬಾ ಸಾಹೇಬರ ಬರಹ ಅಸ್ಪೃಶ್ಯರ ಬದುಕು ಸಂಘಟನೆಯಿಂದ ಇಂದು ಬೃಹತ್ ಪ್ರತಿಭಟನೆ ಮಾಡಲಾಯಿತು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು. ಕೂಡಲೇ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿ ಆರೋಪಿಗಳ ಬಂಧಿಸಿ ಅವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರತಿಭಟದಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಮಂಜುನಾಥ್ ದೊಡ್ಡಮನಿ, ಮಂಜುನಾಥ್ ವರೂರ್, ಸುರೇಶ್ ಮಾದರ್,ಶ್ರೀನಿವಾಸ್ ಅವರ ಹಳ್ಳಿ, ಜಗದೀಶ್ ಮಾದರ್, ಉಮೇಶ್ ಎ ಎಚ್,ಪ್ರದೀಪ್ ಮೂಲಿಮನಿ,ನಾರಾಯಣ್ ಮದರ್, ಸಮೀರ್ ಸಬ್ಬಾಪುರ್ ಸೇರದಂತೆ ಮೊದಲಾದವರು ಭಾಗವಹಿಸಿದ್ದರು.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ. ನಗರದಲ್ಲಿ ಪ್ರತಿಭಟನೆ
Related Posts
ರಾಷ್ಟ್ರೀಯ ವಿಜ್ಞಾನ ದಿನಾಚರಣೆ
Spread the love ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ ಮತ್ತು ಆವಿಷ್ಕಾರ ಸಂಶೋಧನೆಗಳ ಅವಶ್ಯಕತೆ ಇದೆ. ಹೊಸ ಅನ್ವೇಷಣೆ ಮತ್ತು ತಂತ್ರಜ್ಞಾನದಲ್ಲಿ ಯುವ ಸಂಶೋಧಕರ ಪಾತ್ರ ಬಹಳ ಇದೆ ಎಂದು *ದೆಹಲಿ ಐಐಟಿಯ ಕೆಮಿಕಲ್ ಇಂಜನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ…
ಆಡಳಿತಾತ್ಮಕವಾಗಿ ಅಧಿಕಾರಿಗಳು ಜನಸ ಸ್ನೇಹಿ ಆಗಿರಬೇಕು
Spread the love *ಸರಕಾರ ನೀಡುವ ಸೇವಗಳು ಸಮಯಕ್ಕೆ ಸರಿಯಾಗಿ ಜನರಿಗೆ ತಲಪಲು ಮಾಹಿತಿ ತಂತ್ರಜ್ಞಾನದ ಪಾತ್ರ ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ* ಎಂದು ಕರ್ನಾಟಕ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಆಡಳಿತಾತ್ಮಕ ಸುಧಾರಣಾ ಆಯೋಗದ ಮಾಜಿ ಅಧ್ಯಕ್ಷರಾದ…